ತುಮಕೂರು : ಗರ್ಭಿಣಿ ಕಸ್ತೂರಿ ಸಾವನ್ನಪ್ಪಿ ಎರಡು ದಿನ ಕಳೆಯುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಇದುವೆರೆವಿಗೂ ಭೇಟಿ ನೀಡಿರುವುದಿಲ್ಲ.
ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿ ಕಸ್ತೂರಿಗೆ ಚಿಕಿತ್ಸೆ ನೀಡದೆ ಸಾವಿಗೆ ಕಾರಣವಾದ ಪ್ರಕರಣವು ರಾಷ್ಟ್ರ ಮಟ್ಟದಲ್ಲೂ ಸುದ್ದಿಯಾಗಿ ಮಕ್ಕಳ ರಕ್ಷಣಾ ಹಕ್ಕುಗಳ ಆಯೋಗವು ಗಂಭೀರವಾಗಿ ತೆಗೆದುಕೊಂಡಿದ್ದು, ಇಡೀ ರಾಷ್ಟ್ರ ತಲೆ ತಗ್ಗಿಸುವಂತಹ ಘಟನೆಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಅಕ್ಷೇಪ ವ್ಯಕ್ತವಾಗಿದೆ.