ತುಮಕೂರು:ನ್ಯಾಯಾಲಯಕ್ಕೆ ನೀಡಿದ ಮೌಖಿಕಭರವಸೆ ಹುಸಿಗೊಳಿಸಿ,6000ಕ್ಕು ಹೆಚ್ಚು ಅತಿಥಿ ಉಪನ್ಯಾಸಕರನ್ನು,ಅವರ 20 ವರ್ಷಗಳ ಸೇವೆಯನ್ನು ಪರಿಗಣಿಸಿದೆ, ಆರ್ನಹ ಎಂಬ ಹಣೆಪಟ್ಟಿಕಟ್ಟಿ, ಸೇವೆಯಿಂದ ತೆಗೆದು ಹಾಕಿರುವ ಉನ್ನತ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ,2026ರ ಜನವರಿ 05 ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷರಾದ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದಅವರು,ಸುಮಾರು 20ಕ್ಕೂ ಹೆಚ್ಚು ವರ್ಷಗಳ ಕಾಲ ನಮ್ಮಿಂದ ಸೇವೆ ಪಡೆದು, ಈಗ ಅನರ್ಹಎಂದು ಹೇಳಿ ಕೆಲಸದಿಂದತಗೆಯುವ ಮೂಲಕ ಹೈಕೋರ್ಟಆದೇಶಉಲ್ಲಂಘನೆಯಜೊತೆಗೆ,ಯುಜಿಸಿ ನಿಯಮವನ್ನುರಾಜ್ಯ ಸರಕಾರ ಗಾಳಿಗೆ ತೂರಿದೆ. ಸರಕಾರದ ಈ ಜನವಿರೋಧಿ ನಡೆಯ ವಿರುದ್ದ ಸರಕಾರಿ ಪ್ರಥಮದರ್ಜೆಕಾಲೇಜುಅತಿಥಿಉಪನ್ಯಾಸಕರಜೊತೆಗೆ,ಪ್ರಾಥಮಿಕ ಶಾಲೆಗಳಲ್ಲಿ ಕೆಪಿಎಸ್ ಮ್ಯಾಗ್ನಟ್ ಶಾಲೆಯ ಹೆಸರಿನಲ್ಲಿಅತಂತ್ರರಾಗಿರುವ 70 ಸಾವಿರ ಅತಿಥಿ ಉಪನ್ಯಾಸಕರು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.
ನಾವು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಸೇರುವ ಸಂದರ್ಭದಲ್ಲಿ ಶೇ65 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿದ್ದರೆ ಸಾಕು ಎಂಬ ಮಾನದಂಡ ಮುಂದಿಟ್ಟು, ನಮ್ಮನ್ನು ಅತ್ಯಂತ ಕಡಿಮೆ ಗೌರವ ಧನಕ್ಕೆ ದುಡಿಸಿಕೊಂಡು, ಇನೇನು ನಿವೃತ್ತಿಯ ವಯಸ್ಸು ಹತ್ತಿರವಾಗುತ್ತಿದೆ ಎನ್ನುವ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 6ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳಿದೆ.ಕರ್ನಾಟಕ ಹೈಕೋರ್ಟಿಗೆ 24-11-2025ರಂದು ಸರಕಾರದ ಪರವಾಗಿ ಅಡ್ವಕೇಟ್ ಜನರಲ್ ಅವರು ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ನ್ಯಾಯಪೀಠಕ್ಕೆ ಮೌಖಿಕ ಭರವಸೆ ನೀಡಿ, ಡಿಸೆಂಬರ್ 08 ರಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಹಾಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲು ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿ ಮನೆ ಮುಂದೆ ಹೋರಾಟ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಸದಸ್ಯರಾದ ಮಂಜುನಾಥ್ ಜೋಗಿ ಮಾತನಾಡಿ, ಸುಪ್ರಿಂಕೋರ್ಟಿನ ಆದೇಶದಂತೆ ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಜೊತೆಗೆ, ಸತತ 10 ವರ್ಷ ಕಾರ್ಯ ನಿರ್ವಹಿಸಿದ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂಬ ಆದೇಶವನ್ನು ಪಾಲಿಸುತ್ತಿಲ್ಲ. ಬದಲಿಗೆ ಯುಜಿಸಿ ನಿಯಮದ ಕೆಲವೇ ಅಂಶಗಳನ್ನು ಮುಂದಿಟ್ಟು, ನೀವು ನೆಟ್, ಸ್ಲಟ್,ಎಂ.ಫೀಲ್, ಪಿಹೆಚ್ಡಿ ಪಡೆದಿಲ್ಲ. ಹಾಗಾಗಿ ನೀವು ಆರ್ಹರಲ್ಲ ಎಂದು ಬೀದಿಗೆ ತಳ್ಳಲು ಹೊರಟಿದೆ. ನಮ್ಮನ್ನು ಸೇವೆಗೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಅಗತ್ಯವಿಲ್ಲದ ಈ ಆರ್ಹತೆಗಳು, 20 ವರ್ಷ ಪಾಠ ಮಾಡಿ, ಸಾವಿರಾರು ಮಕ್ಕಳಿಗೆ ಪದವಿ ಶಿಕ್ಷಣ ನೀಡಿ, ಅವರಿಗೆ ದಾರಿ ದೀಪ ಕಲ್ಪಿಸಿದ ನಂತರ ಉದ್ಬವಿಸಿದ್ದು ಏಕೆ?, ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ನಾವು ಆನರ್ಹರು ಎಂದಾದರೆ, ನಮ್ಮ ಪಾಠ ಕೇಳಿ ಪದವಿಧರರಾದವರು ಅರ್ಹ ಪದವಿಧರರೇ? ಈ ಪ್ರಶ್ನೆಗೆ ಸರಕಾರವೇ ಉತ್ತರ ನೀಡಬೇಕು ಎಂದರು.
ಇಡೀ ರಾಷ್ಟ್ರಕ್ಕೆ ಇರುವುದು ಒಂದೇ ಯುಜಿಸಿ ನಿಯಮ. ಆದರೆ ರಾಜ್ಯ ಸರಕಾರ ಮಾತ್ರ ಕರ್ನಾಟಕಲ್ಲಿ 450 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕದಲ್ಲಿ ನ್ಯಾಯಾಲಯಕ್ಕೆ ಯುಜಿಸಿ ನಿಯಮಗಳ ತಪ್ಪು ವ್ಯಾಖ್ಯಾನ ಮಾಡಿ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಯಮದ ಪ್ರಕಾರ ನೆಟ್, ಸ್ಲೆಟ್,ಪಿ.ಹೆಚ್.ಡಿ. ಕಡ್ಡಾಯ. ಆದರೆ ಈಗಾಗಲೇ ಹತ್ತಾರು ವರ್ಷ ಸೇವೆ ಸಲ್ಲಿಸಿರುವವರಿಗೆ ವಿನಾಯಿತಿ ಇದೆ.ಆದನ್ನು ಮುಚ್ಚಿಟ್ಟು ನ್ಯಾಯಾಲಯದ ದಾರಿ ತಪ್ಪಿಸುವುದರ ಜೊತೆಗೆ, ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಖಜಾಂಚಿ ಮನೋಹರ್.ಎಸ್, ರಂಗಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.