ಎಸ್.ಆರ್.ಶ್ರೀನಿವಾಸ್ ಮನೆಗೆ ಸಾ.ರಾ.ಮಹೇಶ್ ದಿಢೀರ್ ಭೇಟಿ- ಜೆಡಿಎಸ್‍ಗೆ ವಾಪಸ್ಸು ತರುವ ಪ್ರಯತ್ನವೇ!

ತುಮಕೂರು : ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಅವರು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಮನೆಗೆ ದಿಢೀರ್ ಭೇಟಿ ನೀಡಿರುವುದು ಜೆ.ಡಿ.ಎಸ್. ಪಕ್ಷಕ್ಕೆ ಎಸ್.ಆರ್.ಶ್ರೀನಿವಾಸ್ ಅವರನ್ನು ವಾಪಸ್ಸು ಕರೆ ತರುವ ಪ್ರಯತ್ನ ನಡೆಯುತ್ತಾ ಇದೆ ಎನ್ನಲಾಗುತ್ತಿದೆ.

ಕಳೆದ ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಬುಕ್ಕಪಟ್ಟಣ ಹೋಬಳಿಯ ಜಾನಕಲ್‍ನಲ್ಲಿ ದೇವಸ್ಥಾನ ಒಂದರ ಉದ್ಘಾಟನೆಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಜಿಲ್ಲೆಯ ಕೆಲ ನಾಯಕರ ಜೊತೆ ಸಭೆ ನಡೆಸಿದ್ದಾಗ ಎಸ್.ಆರ್.ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಗುಬ್ಬಿ, ತುರುವೇಕೆರೆ, ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಜೆಡಿಎಸ್‍ಗೆ ಹಿನ್ನಡೆಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ಎಸ್.ಆರ್.ಶ್ರೀನಿವಾಸ್ ಅವರನ್ನು ವಾಪಸ್ಸು ಜೆಡಿಎಸ್‍ಗೆ ಕರೆ ತರುವ ಹಿನ್ನಲೆಯಲ್ಲಿ ಸಾ.ರಾ.ಮಹೇಶ್ ಅವರು ಎಸ್.ಆರ್.ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿ ಮಾತು ಕತೆ ನಡೆಸಿದರನ್ನಲಾಗುತ್ತಿದೆ.

ಈಗಾಗಲೇ ಎಸ್.ಆರ್.ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಗೊಂಡಿದ್ದು, ಒಂದು ಕಾಲನ್ನು ಜೆಡಿಎಸ್ ಪಕ್ಷದಿಂದ ಹೊರಗಿಟ್ಟಿದ್ದು, ರಾಹುಲ್ ಗಾಂಧಿಯವರ ಜೋಡೋ ಯಾತ್ರೆಯಲ್ಲಿಯೂ ಸಹ ಎಸ್.ಆರ್.ಶ್ರೀನಿವಾಸ್ ಹೆಜ್ಜೆ ಹಾಕಿರುದ್ದರು. ಡಿಸೆಂಬರ್‍ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುವುದಾಗಿ ಎಸ್.ಆರ್.ಶ್ರೀನಿವಾಸ್ ಈಗಾಗಲೇ ಘೋಷಣೆ ಮಾಡಿದ್ದಾರೆ, ದಿಢೀರ್ ಸಾ.ರಾ.ಮಹೇಶ್ ಭೇಟಿ ನೀಡಿರುವುದರ ಮರ್ಮವೇನು ಎಂಬುದು ಒಂದೆರಡು ದಿನಗಳಲ್ಲಿ ತಿಳಿಯಲಿದೆ.

ಸಾ.ರಾ.ಮಹೇಶ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಎಸ್.ಆರ್.ಶ್ರೀನಿವಾಸ್ ಅವರು ಪಕ್ಷ ಬಿಟ್ಟರೆ ಜೆಡಿಎಸ್‍ಗೂ ನಷ್ಟವಾಗಲಿದೆ, ರಾಷ್ಟ್ರೀಯ ನಾಯಕರಾದ ದೇವೇಗೌಡರು ಮತ್ತು ಕಾರ್ಯಕರ್ತರು ತೀರ್ಮಾನ ಮಾಡಿದರೆ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ನಾನು ವಾಸು ಮೊದಲಿನಿಂದಲೂ ಚೆನ್ನಾಗಿದ್ದೇವೆ ಆಗಾಗ ಮಾತನಾಡುತ್ತಲೇ ಇರುತ್ತೇವೆ, ರಾಜಕೀಯಕ್ಕಾಗಿ ಮಾತನಾಡಲಿಕ್ಕೆ ಬಂದಿಲ್ಲ, ಸೌಹಾರ್ಧ ಭೇಟಿಯಷ್ಟೇ, ಮಗ ಸಿನಿಮಾ ಮಾಡುವ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದರು.

Leave a Reply

Your email address will not be published. Required fields are marked *