ಕಾಂಗ್ರೆಸ್ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *