ತುಮಕೂರು:ಕ್ರೀಡೆ ಮನುಷ್ಯನಲ್ಲಿ ಸ್ಪೂರ್ತಿಯನ್ನು ನೀಡುತ್ತಿದೆ. ಕ್ರೀಡೆಯಿಂದ ಹೊಸ ಹುಮ್ಮಸ್ಸು ಬರುವುದಲ್ಲದೆ, ಎಲ್ಲರೂ ಸೇರಿ ಒಂದು ತಂಡವಾಗಿ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ. ತಿಳಿಸಿದ್ದಾರೆ.
ನಗರದ ಮಹಾತ್ಮಗಾಂಧಿ ಸ್ಟೇಡಿಯಂನ ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಸಮಾಜ ಕಲ್ಯಾಣ ಇಲಾಖೆ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಇತ್ತೀಚಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ.ನಮ್ಮ ಇಲಾಖೆಯಲ್ಲಿ ಪ್ರತಿವರ್ಷ ಕ್ರೀಡಾಕೂಟ ಎರ್ಪಡಿಸಲಾಗುತ್ತಿದೆ.ಇದು ನಿಮಗೆ ಎರಡನೇ ವರ್ಷದ ಕ್ರೀಡಾಕೂಟ. ನಿಮ್ಮಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಇದು ಒಳ್ಳೆಯ ವೇದಿಕೆ ಇದನ್ನು ಬಳಕೆ ಮಾಡಿಕೊಂಡು, ಮತ್ತಷ್ಟು ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಮೇಲೆ ಬರಲು ಪ್ರಯತ್ನಿಸಿ ಎಂದರು.
ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜ್ಯಮಟ್ಟದ ಒಲಂಪಿಕ್ ಕ್ರೀಡಾಕೂಟ ನಡೆದಿವೆ. ಕ್ರೀಡಾ ಚಟುವಟಿಕೆಗೆ ಒಳ್ಳೆಯ ವ್ಯವಸ್ಥೆ ಇದೆ.ನಿಮಗೆ ಒಳ್ಳೆಯ ಕ್ರೀಡಾ ಮನೋಭಾವನೆ ಒಳ್ಳೆಯಲು ಸಹಕಾರಿಯಾಗಲಿದೆ.ಈ ಕ್ರೀಡಾಕೂಟದ ಮೂಲಕ ನಿಮ್ಮ ಇಲಾಖೆಯ ವಿವಿಧ ಜಿಲ್ಲೆಗಳ ನೌಕರರ ಸಮನ್ವಯತೆ ಬೆಳೆಯಲಿದೆ.ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಗಟ್ಟಿತನದಿಂದ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದು ಎಸ್ಪಿ ಅಶೋಕ್ ಕೆ.ವಿ. ನುಡಿದರು.
ತುಮಕೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ,ಕ್ರೀಡಾಕೂಟಗಳಿಗೆ ಮೇಲು,ಕೀಳು,ಬಡವ, ಬಲ್ಲಿದ ಎಂಬ ಭೇಧ ಭಾವವಿಲ್ಲದೆ ಎಲ್ಲರೂ ಒಂದೆಡೆ ಸೇರಿಸುವ ವೇದಿಕೆಯಾಗಿದೆ.ಕ್ರೀಡೆಗೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಇದೆ.ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ತಾವೆಲ್ಲೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ,ನಿಮ್ಮ ಪ್ರತಿಭೆ ಪ್ರದರ್ಶಿಸಿ ಎಂದು ಕಿವಿ ಮಾತು ಹೇಳಿದರು.
ಕ್ರೀಡಾಯಲ್ಲಿ ಸಾಧನೆ ಮಾಡಬೇಕಾದರೆ ಮನಸ್ಸು ಮತ್ತು ಪ್ರಜ್ಞೆ ಎರಡು ಒಗ್ಗೂಡಿಸಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ತೊಡಗಿಸಿಕೊಂಡರೆ ಯಶಸ್ಸು ಸಾಧಿಸಬಹುದು.ಎಲ್ಲರಲ್ಲಿಯೂ ಪ್ರತಿಭೆ ಇರುತ್ತದೆ.ಅದನ್ನು ಓರೆಗೆ ಹಚ್ಚಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿವೆ.ನಿರಂತರ ಪ್ರಯತ್ನದಿಂದ ಅವುಗಳನ್ನು ನಮ್ಮದಾಗಿಸಿಕೊಳ್ಳಲು ಸಾಧ್ಯವಿದೆ.ಆಟವಾಡಲು, ಹಾಡು ಹಾಡಲು ಎರಡಕ್ಕೂ ಅವಕಾಶವಿದೆ. ನಿಮ್ಮ ಇಚ್ಚೆಯ ವಿಷಯದಲ್ಲಿ ಏಕಾಗ್ರತೆಯಿಂದ ಪಾಲ್ಗೊಳ್ಳಿ ಎಂದು ಎಡಿಸಿ ಡಾ.ಎನ್.ತಿಪ್ಪೇಸ್ವಾಮಿ ಸಲಹೆ ನೀಡಿದರು.
ವೇದಿಕೆಯಲ್ಲಿ ತುಮಕೂರು ಉಪವಿಭಾಗಾಧಿಕಾರಿ ನಾಹಿದ್ ಜಮ್ಹ್ ಜಮ್ಹ್,ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೆಶಕರಾದ ಲಕ್ಷ್ಮಣರೇಖಿ, ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು,ನೌಕರರು ಪಾಲ್ಗೊಂಡಿದ್ದರು.