ಸ್ಥಳೀಯ ಸಂಸ್ಥೆಗಳ ಸರ್ಕಾರ ಇಲ್ಲದಿರುವಾಗ ಸಚಿವರುಗಳಿಗೆ 2ರಿಂದ3 ಜಿಲ್ಲೆಗಳ ಉಸ್ತುವಾರಿ ನೀಡಿ ಧನ್ಯರಾದ ಮುಖ್ಯಮಂತ್ರಿ, ಪರಮೇಶ್ವರ್ ಗೆ ತುಮಕೂರು, ಚಿತ್ರದುರ್ಗ.

ಬೆಂಗಳೂರು : ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಇರುವ ಸರ್ಕಾರವು, ಇದೀಗ ಸಂಪುಟದ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯಪಾಲರು ಅನುಮೋದಿಸಿದ್ದು, ಕೆಲವು ಸಲ ಅದೃಷ್ಟ ಹುಡುಕಿಕೊಂಡು ಬರುವುದರ ಜೊತೆಗೆ ಒದ್ದುಕೊಂಡು ಬರುತ್ತದೆಯಂತೆ, ಹಾಗೇಯೇ ರಾಜ್ಯ ಸಚಿವರುಗಳಿಗೆ ಎರಡು, ಮೂರು ಜಿಲ್ಲೆಗಳ ಉಸ್ತುವಾರಿ ಸಚಿವರನ್ನಾಗಿ ಮಾಡಿ ಮುಖ್ಯಮಂತ್ರಿಗಳು ಧನ್ಯರಾಗಿದ್ದಾರೆ.

ಪಾಪ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ಮಂಡಳಿ, ನಿಗಮದ ಅದೃಷ್ಠವೂ ಒಲಿದಿಲ್ಲ, ಆದರೆ ಸಚಿವ ಸಂಪುಟದ ಹತ್ತು ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯಪಾಲರು ಮುಖ್ಯಮಂತ್ರಿಯವರ ಮನವಿ ಮೇರೆಗೆ ಉಸ್ತುವಾರಿ ಸಚಿವರ ಪಟ್ಟಿಯನ್ನು ಅನುಮೋದಿಸಿದ್ದು, ಕೆ.ಹಚ್.ಮುನಿಯಪ್ಪ, ಯು.ಟಿ.ಖಾದರ್ ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಮೂರು ಜಿಲ್ಲೆಗಳಿಗೆ, ಉಳಿದವರಿಗೆ ಎರಡು ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿದೆ.

ಸಂಪುಟ ವಿಸ್ತರಣೆಯಾದ ನಂತರ ಮತ್ತೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಾಗಲಿದೆ, ಈಗ ಇರುವ ಸಚಿವರಿಗೆ ಅದೃಷ್ಠವಂತೂ ಖುಲಾಯಿಸಿದೆ. ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಮಾಡಲಾಗಿದೆ. ಸದ್ಯ ಪ್ರತಿಯೊಬ್ಬ ಸಚಿವರಿಗೆ ಎರಡರಿಂದ ಮೂರು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಸಂಪುಟ ವಿಸ್ತರಣೆ ಆದ ಬಳಿಕ ಇದು ಬದಲಾವಣೆ ಆಗುವ ಸಾಧ್ಯತೆ ಇದೆ.

ಡಾ.ಜಿ. ಜಿ. ಪರಮೇಶ್ವರ – ತುಮಕೂರು ಮತ್ತು ಚಿತ್ರದುರ್ಗ,ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ,ರಾಮಲಿಂಗರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ,ಎಂ.ಬಿ. ಪಾಟೀಲ್ – ವಿಜಯಪುರ ಮತ್ತು ಬಾಗಲಕೋಟೆ,ಕೆ.ಜೆ. ಜಾರ್ಜ್ – ಚಿಕ್ಕಮಗಳೂರು ಮತ್ತು ದಾವಣಗೆರೆ,ಕೃಷ್ಣ ಬೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ,ಈಶ್ವರ ಖಂಡ್ರೆ – ಬೀದರ್ ಮತ್ತು ಗದಗ,ಸತೀಶ್ ಜಾರಕಿಹೊಳಿ – ಬೆಳಗಾವಿ, ಧಾರವಾಡ ಮತ್ತು ಹಾವೇರಿ,ಪ್ರಿಯಾಂಕ್ ಖರ್ಗೆ – ಕಲಬುರ್ಗಿ ಮತ್ತು ಯಾದಗಿರಿ,ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು ಮತ್ತು ಕೊಪ್ಪಳ,ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ,ಬೈರತಿ ಸುರೇಶ್- ಕೋಲಾರ, ಚಿಕ್ಕಬಳ್ಳಾಪುರ, ಯು ಟಿ ಖಾದರ್- ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಕೊಪ್ಪಳ ನೀಡಲಾಗಿದೆ.

ಮೈಸೂರು ಪಡೆದುಕೊಂಡ ಯತೀಂದ್ರ ಮೈಸೂರು ಜಿಲ್ಲೆಯ ಉಸ್ತುವಾರಿಯನ್ನು ಯತೀಂದ್ರ ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಹಿಂದೆ ಎಚ್ಸಿ ಮಹದೇವಪ್ಪ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಆಗಿದ್ದರು. ಅವರು ಡಿಕೆಶಿ ಮೊದಲ ಹಂತದ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಹೀಗಾಗಿ ಯತೀಂದ್ರ ಅವರು ಮೈಸೂರು ಉಸ್ತುವಾರಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *