ದೇಶದ ಪ್ರಜಾಪ್ರಭುತ್ವ ಭದ್ರಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಬಹುದೊಡ್ಡದು: ಜ್ಯೋತಿ ಗಣೇಶ್

ತುಮಕೂರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವೂ ಕೂಡ ನಾಲ್ಕನೇ ಅಂಗವಾಗಿ ಕಾರ್ಯಾ ನ್ಯಾಯ ಶಾಸನ ವಿಚಾರಗಳಲ್ಲಿ ಮಹತ್ತರವಾದ ಬದಲಾವಣೆ ತರುವಲ್ಲಿ ಬಹು ಮುಖ್ಯವಾಗಿರುವ ಪತ್ರಿಕಾ ರಂಗ ದೇಶದ ಪ್ರಜಾಪ್ರಭುತ್ವ ವನ್ನು ಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತುಮಕೂರು ನಗರ ಶಾಸಕ ಜಿ ಬಿ ಜ್ಯೋತಿ ಗಣೇಶ್ ಅವರು ತಿಳಿಸಿದರು.

ಜನವರಿ 18 ಮತ್ತು 19 ರಂದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಘಟಕ ಇವರ ಅತಿಥ್ಯದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವೇದಿಕೆ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸೇರಿದಂತೆ ಇತರೆ ಪೂರ್ವ ಸಿದ್ಧತಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಮ್ಮ ತುಮಕೂರಿನ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಶಿಕ್ಷಣ ಭೀಷ್ಮ ಡಾ ಎಚ್ ಎಮ್ ಗಂಗಾಧರಯ್ಯ ನವರು ಕಟ್ಟಿ ಬೆಳೆಸಿದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರು ಒಂದೆಡೆ ಸೇರಿ ಸಮ ಸಮಾಜದ ನಿರ್ಮಾಣಕ್ಕೆ ಪತ್ರಕರ್ತರು ನೀಡಿರುವ ಕೊಡುಗೆ ಎಂತಹದು ಎಂಬ ವಿಷಯವನ್ನು ಸಮಾಜಕ್ಕೆ ಪಸರಿಸಲಿದ್ದು ದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆ ತಿದಲು ಪತ್ರಿಕಾ ರಂಗದ ತಮ್ಮ ಪಾತ್ರವನ್ನ ಇಂತಹ ಸಮ್ಮೇಳನಗಳಲ್ಲಿ ಚರ್ಚಿಸುವುದು ಶ್ಲಾಘನೀಯ ಎಂದು ತಿಳಿಸಿದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ಅವರು ಮಾತನಾಡಿ ಗೃಹ ಸಚಿವರು ಹಾಗೂ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ್ ಅವರ ಆಶಯದಂತೆ ನಮ್ಮ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ವಿಭಿನ್ನವಾಗಿ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ ರಾಜ್ಯಾದ್ಯಂತ ಸಮ್ಮೇಳನಕ್ಕೆ ಆಗಮಿಸುತ್ತಿರುವ ಪತ್ರಕರ್ತರ ಸಂಖ್ಯೆಯನ್ನು ಮೊದಲ ಬಾರಿಗೆ ಆನ್ಲೈನಲ್ಲಿ ನೋಂದಣಿ ಮಾಡಿರುವುದು ಡಿಜಿಟಲ್ ಮಾಧ್ಯಮಕ್ಕೆ ಹಿಡಿದ ಕೈಗನ್ನಡಿಯಂತಾಗಿದೆ ಇದನ್ನು ನೋಡಿದರೆ ತಿಳಿಯಲಿದೆ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ಸಮ್ಮೇಳನದ ಭಾಗವಾಗಿ ನಡೆಯಲಿರುವ ವಿವಿಧ ಗೋಷ್ಠಿಗಳು ಮಹತ್ವದ್ದಾಗಿದ್ದು ಪ್ರಮುಖ ಸುದ್ದಿ ಸಂಸ್ಥೆಗಳಿಂದ ಆಗಮಿಸುವ ಮುಖ್ಯಸ್ಥರ ಗಮನ ಸೆಳೆಯಲಿದೆ ಇಂತಹ ಮಹತ್ವದ ಸಮ್ಮೇಳನಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಕಾನಿಪ ಜಿಲ್ಲಾಧ್ಯಕ್ಷ ಚೀನಿ ಪುರುμÉೂೀತ್ತಮ್ ಅವರು ಮಾತನಾಡಿ ಈಗಾಗಲೇ ತಿಳಿಸಿರುವಂತೆ ಜನವರಿ 18 ಮತ್ತು 19ರಂದು ಐತಿಹಾಸಿಕವಾದ ಬೃಹತ್ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು 18ರ ಬೆಳಿಗ್ಗೆ 8 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಸ್ ಎಸ್ ಐ ಟಿ ಮೈದಾನದವರೆಗೂ ನಡೆಯಲಿರುವ ವಿಶೇಷ ಪತ್ರಕರ್ತರ ಮೆರವಣಿಗೆ ಮತ್ತು ಟ್ಯಾಬ್ಲೋ ಪತ್ರಕರ್ತರ ಭಾಗವಹಿಸುವಿಕೆ ಜನಪ್ರತಿನಿಧಿಗಳ ಚಾಲನೆ ಜಿಲ್ಲೆಯ ವಿವಿಧ ಮಠಾಧೀಶರ ಸಾನಿಧ್ಯ ವಿಶೇಷವಾಗಿರುತ್ತದೆ ಎಂದು ತಿಳಿಸಿದರು.

ಅಂದು ನಡೆಯುವ ವೇದಿಕೆ ಕಾರ್ಯಕ್ರಮ ಬಹಳ ವಿಶೇಷವಾಗಿದ್ದು ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟನೆ ಮಾಡಲಿದ್ದು ಕೇಂದ್ರ ಮಂತ್ರಿ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ್, ಸಹಕಾರ ಸಚಿವ ಕೆ ಎನ್ ರಾಜಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ ನಂತರ ಪತ್ರಕರ್ತರಿಗಾಗಿ ವಿವಿಧ ಗೋಷ್ಠಿಗಳು ನಡೆಯಲಿದ್ದು ಇಂದು ಸಂಜೆ ನಡೆಯಲಿರುವ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ಅವರ ಸಂಗೀತ ಸಂಜೆ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಲಿದೆ ಈ ರೀತಿಯಾಗಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಎರಡನೇ ದಿನವು ಮುಂದುವರೆಯಲಿದ್ದು ವಿವಿಧ ಗೋಷ್ಠಿಗಳು ಸೇರಿದಂತೆ ಅನೇಕ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಕಣ್ಣಿಗೆ ಮುದ ನೀಡಲಿದ್ದು ಸಮರೋಪ ಸಮಾರಂಭದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿವೈ ರಾಘವೇಂದ್ರ ಸೇರಿದಂತೆ ವಿವಿಧ ಪ್ರಮುಖರು ರಾಜಕಾರಣಿಗಳು ಭಾಗಿಯಾಗಲಿದ್ದು ಅಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕಲ್ಪತರು ನಾಡಿನಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರು ರತ್ನ ಪ್ರಶಸ್ತಿಯನ್ನು ವಿತರಣೆ ಮಾಡಲಾಗುವುದು ಅಲ್ಲದೇ ಈ ಸಮಾರಂಭದಲ್ಲಿ ಕೆಯುಡಬ್ಲ್ಯೂ ಜೆ ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಧಾನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ನಡೆಸಲಾಗುವುದು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಮಹಿಳಾ ಪದಾಧಿಕಾರಿಗಳು, ಮಹಿಳಾ ಸಂಘಟಕರು ಸೇರಿದಂತೆ ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಮುಕ್ತ ಅವಕಾಶವಿದು ಈ ಸಮ್ಮೇಳನಕ್ಕೆ ಬಂದು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *