ಜಗತ್ತಿನ ಮಾಧ್ಯಮದ ದಿಕ್ಕಿಗೂ ಭಾರತದ ಮಾಧ್ಯಮ ದೃಷ್ಟಿಕೋನಕ್ಕೂ ಅಜಗಜಾಂತರ ವ್ಯತ್ಯಾಸ-ಪತ್ರಕರ್ತ ಡಾ.ಪಿ.ಸಾಯಿನಾಥ್

ತುಮಕೂರು. : ಕೋರೋನ ಸಂದರ್ಭದಲ್ಲಿ ಆದ ಲಾಕ್‍ಡೌನ್‍ನಿಂದ ಸುಮಾರು 90ರಷ್ಟು ಪತ್ರಕರ್ತರು ತಮ್ಮ ಕೆಲಸ ಕೊಳ್ಳದುಕೊಂಡರು, ಉದ್ಯೋಗ ಭದ್ರತೆಯೇ ಇಲ್ಲದಂತಾಯಿತು.ರೈತರು ಸುಮಾರು 1000ಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸಿ, 750ಕ್ಕೂ ಹೆಚ್ಚು ಜನ ಸಾವನ್ನಪ್ಪಿದರು.ಆದರೆ ಶೇ60ರಷ್ಟು ಭಾರತದ ಮಾಧ್ಯಮಗಳು ಮೋದಿ,ಅಂಬಾನಿ,ಅದಾನಿಯ ಜಪ ಮಾಡುತ್ತಿದ್ದವು. ಮಾನವೀಯ ವರದಿಗಳನ್ನು ನಿರ್ಲಕ್ಷಿಸಲಾಯಿತು. ಜಗತ್ತಿನ ಮಾಧ್ಯಮದ ದಿಕ್ಕಿಗೂ ಭಾರತದ ಮಾಧ್ಯಮ ದೃಷ್ಟಿಕೋನಕ್ಕೂ ಅಜಗಜಾಂತರ ವ್ಯತ್ಯಾಸವನ್ನು ಕಾಣುತ್ತಿದ್ದೇವೆ ಎಂದು ಮ್ಯಾಗ್ನೇಸ್ ಪ್ರಶಸ್ತಿ ಪುರಸ್ಕøತ ಪತ್ರಕರ್ತ ಡಾ.ಪಿ.ಸಾಯಿನಾಥ್ ಹೇಳಿದರು.

ನಗರದ ಶ್ರೀಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ 39ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡುತಿದ್ದ ಅವರು,ಪತ್ರಿಕಾ ಒಕ್ಕೂಟಗಳು ಅವನತಿಯಾದರೆ ಸ್ವಾತಂತ್ರ ಪತ್ರಿಕೋದ್ಯಮ ಸತ್ತ ಹಾಗೆ.ಆದ್ದರಿಂದ ಪತ್ರಕರ್ತರು ಮತ್ತು ಸಂಘಟನೆಗಳು ಸಂಯುಕ್ತವಾಗಿ ಇಂತಹ ವೇದಿಕೆಗಳ ಹೋರಾಟ ನಡೆಸುವ ಅಗತ್ಯವಿದೆ ಎಂದರು.

ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸೂಕ್ತ ಸಂದರ್ಭದಲ್ಲಿ ಸಿಗಬೇಕಾದರೆ ಪತ್ರಕರ್ತರ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ಆ ಮೂಲಕ ಪತ್ರಿಕಾ ಸ್ವಾತಂತ್ರ, ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಸಮ್ಮೇಳನಗಳು, ಕಾರ್ಯಾಗಾರಗಳಲ್ಲಿ, ಪತ್ರಕರ್ತರ ಸಮಸ್ಯೆಗಳ, ಹಕ್ಕು ಬಾಧ್ಯತೆಗಳನ್ನು ಚರ್ಚಿಸಲು ಇಂತಹ ವೇದಿಕೆಗಳು ನಿರಂತರವಾಗಿ ನಡೆಯಬೇಕು.ಪತ್ರಿಕೋದ್ಯಮ ಮತ್ತು ಪತ್ರಕರ್ತರ ನಡುವೆ ಸಾಕಷ್ಟು ವೈರುದ್ಯವಿದೆ.ಉದ್ಯಮ ಬದಲಾವಣೆಗಳನ್ನು ಕಾಣುತ್ತಿದೆ.ವೃತ್ತಿಪರ ಪತ್ರಕರ್ತರ ಬದುಕು ಹಸನಾಗಲು ಸರಕಾರಗಳನ್ನು ಮನವೊಲಿಸುವ ತೀವ್ರ ಹೋರಾಟಗಳನ್ನು ಸಮ್ಮೇಳನಗಳಲ್ಲಿ ರೂಪಿಸಬೇಕೆಂದು ಪಿ.ಸಾಯಿನಾಥ್ ಸಲಹೆ ನೀಡಿದರು.

ಬಂಡವಾಳ ಶಾಹಿ ಮಾಧ್ಯಮ ದೊರೆಗಳು ಪತ್ರಿಕಾ ಕ್ಷೇತ್ರದ ಹಿಡಿತವನ್ನು ಸಾಧಿಸುತ್ತಿದ್ದಾರೆ. ಇದು ವಾಕ್ ಸ್ವಾತಂತ್ರವನ್ನು ಹತ್ತಿಕ್ಕುವ ಕೆಲಸವಾಗಿದೆ. ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಕೆಲಸಗಳನ್ನು ಮಾಡಿಸುವುದರ ಮೂಲಕ ಯುವ ಪತ್ರಕರ್ತ ಸಮೂಹದ ಭವಿಷ್ಯವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಸಾಯಿನಾಥ್ ತಿಳಿಸಿದರು.

ಸ್ವಾತಂತ್ರ ಪತ್ರಿಕೋದ್ಯಮವನ್ನು ಮುಕ್ತವಾಗಿ ಆಸ್ವಾದಿಸುವ ಅವಕಾಶಕ್ಕೆ ಸರಕಾರಗಳು ಕೊಡಲಿ ಪೆಟ್ಟು ನೀಡುತ್ತಿವೆ. ಇದು ಅಭಿವೃದ್ದಿ ಪತ್ರಿಕೋದ್ಯಮಕ್ಕೆ ಕತ್ತು ಹಿಸುಕುವ ಕೆಲಸವಾಗಿದೆ ಎಂದು ದೂಷಿಸಿದ ಅವರು, ದೇಶದ ಪತ್ರಿಕೋದ್ಯಮ ಪರಿಸ್ಥಿತಿ ಅವನತ್ತಿಯತ್ತ ಸಾಗಿದೆ.ಇದಕ್ಕೆ ನಮ್ಮನಾಳುವ ಸರಕಾರಗಳು ಜಾರಿಗೆ ತರುತ್ತಿರುವ ಕಾರ್ಪೋರೇಟ್ ಸಂಸ್ಕøತಿ ಮತ್ತು ಬಂಡವಾಳ ಶಾಹಿ ಹಾಗೂ ವ್ಯಾಣಿಜ್ಯೀಕರಣದ ಪರಿಣಾಮಗಳು ಕಾರಣವಾಗಿವೆ.ಭಾರತದಲ್ಲಿ ನೈಜ ಪತ್ರಿಕೋದ್ಯಮ ಕುಸಿಯುತ್ತಿದೆ.ಇದಕ್ಕೆ ಮೇಲಿನ ಎಲ್ಲವೂ ಕಾರಣವಾಗಿದೆ ಎಂದು ಸರಕಾರದ ಧೋರಣೆಗಳನ್ನು ಖಂಡಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿ,ಸಮ್ಮೇಳನದ ಪತ್ರಕರ್ತರ ವೃತ್ತಿ ಬದುಕಿನ ಗುಣಮಟ್ಟ ಹೆಚ್ಚಿಸಲು ಪೂರಕವಾಗಿವೆ.ಶಾಸಕ ಬಿ.ಸುರೇಶಗೌಡ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.200 ವರ್ಷಗಳ ಹಿಂದಿನಿಂದಲೂ ಪತ್ರಿಕೋದ್ಯಮ ನಡೆದುಕೊಂಡು ಬಂದಿದೆ.ಹಲವಾರು ಬದಲಾವಣೆಗಳಾಗಿವೆ. ಅಚ್ಚುಮೊಳೆ ಯಿಂದ ಕಂಪ್ಯೂಟರ್,ಅರ್ಟಿಪಿಷಿಯಲ್ ಇಂಟಲಿಜೆನ್ಸ್ ಬಂದಿದೆ.ಆದರೆ ಪತ್ರಕರ್ತರ ಸ್ಥಿತಿಗತಿ ಬದಲಾಗಿಲ್ಲ.ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪತ್ರಕರ್ತರಲ್ಲಿ ಹಲವಾರು ವೈರುದ್ಯಗಳಿವೆ. ಬರವಣಿಗೆಯಲ್ಲಿ ಆಸಕ್ತಿ ಇರುವವರೆ ಈ ಕ್ಷೇತ್ರಕ್ಕೆ ಬರುತ್ತಾರೆ. ಪತ್ರಕರ್ತರ ಸ್ಥಿತಿಗತಿಗಳ ಬದಲಾವಣೆಗೆ ಗಂಭೀರ ಚಿಂತನೆ ಅಗತ್ಯವಿದೆ ಎಂದರು.

ಸಮಾಜದ ಆಗುಹೋಗುಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಪತ್ರಕರ್ತರಿಗೆ,ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕಿದೆ. ಟೀಕೆಗಳು ಸಹಜ,ಆದರೆ ಪತ್ರಕರ್ತರು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದು ಸಮ್ಮೇಳನದಲ್ಲಿ ಚರ್ಚೆಯಾಗಬೇಕಿದೆ. ಅಭಿವೃದ್ದಿ,ತನಿಖಾ ಪತ್ರಿಕೋದ್ಯಮ ಮರೆಯಾಗಿದೆ.ಬಳಿ ಹೇಳಿಕೆಗಳು ಹಾಗೂ ಪ್ರತಿ ಹೇಳಿಕೆಗಳಿಗೆ ಸೀಮಿತವಾಗಿದೆ. ಮಾದ್ಯಮಗಳಿಗೆ ನಿಜವಾದ ಸವಾಲಾಗಿರುವುದು ಸೋಷಿಯಲ್ ಮೀಡಿಯಾ.ಪತ್ರಿಕೆಗಳಿ ಇಂದಿಗೂ ವಿಶ್ವಾಸಾರ್ಹತೆ ಉಳಿಸಿ ಕೊಂಡಿವೆ.ಅದನ್ನು ಕಾಪಾಡಿಕೊಂಡು ಹೋಗಬೇಕಾಗಿದೆ.ಗ್ರಾಮೀಣ ಪತ್ರಕರ್ತರಿಗೆ ಬಸ್‍ಪಾಸ್ ಪ್ರಕ್ರಿಯೆ ಚಾಲನೆಯಾಗಲಿದೆ. ಮುಂದಿನ 15 ದಿನದಲ್ಲಿ ಜಾರಿಗೆ ಬರಲಿದೆ. ಆರೋಗ್ಯ ವಿಮೆ ಎಷ್ಟು ಮುಖ್ಯ ಎಂಬುದನ್ನು ಕರೋನ ತೋರಿಸಿಕೊಟ್ಟಿದೆ. ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ ಆರೋಗ್ಯ ವಿಮೆಗೆ ಚಾಲನೆ ಸಹ ನೀಡಿದೆ.ಎಪಿಎಲ್, ಬಿಪಿಎಲ್ ಇಲ್ಲದೆ ಅರೋಗ್ಯಭಾಗ್ಯ 2 ತಿಂಗಳಲ್ಲಿ ಕೈಗೂಡಲಿದೆ.ಸೂರು ನೀಡುವ ವಿಚಾರದಲ್ಲಿ ಜಿಲ್ಲಾಡಳಿತಗಳು ಜಾಗ ಗುರುತಿಸಿ ಕೊಟ್ಟರೆ ಅದನ್ನು ಪತ್ರಕರ್ತರಿಗೆ ನೀಡಲು ಸಿದ್ದವಿದೆ ಎಂದು ಕೆ.ವಿ.ಪ್ರಭಾಕರ್ ನುಡಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ ಮಾತನಾಡಿ,ಕಾರ್ಯಾಂಗದ ಕಣ್ಣು ಮತ್ತು ಕಿವಿ ತೆರೆಸುವ ಕೆಲಸವನ್ನು ಸದಾ ಕಾಲ ಮಾಧ್ಯಮಗಳು ಮಾಡತ್ತಲೇ ಬಂದಿವೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಈ ಕೆಲಸವನ್ನು ಮುದುವರೆಸಿ ಕೊಂಡು ಹೋಗುವ ಸವಾಲು ಎಲ್ಲಾ ಪತ್ರಿಕೆಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದ್ದಾರೆ.
ಬಿಡಿಯಾಗಿದ್ದರೆ ಏನು ಸಾಧ್ಯವಿಲ್ಲ .ರಾಜ್ಯದಲ್ಲಿ ಸುಮಾರು 10 ಸಾವಿರದಷ್ಟಿರುವ ಪತ್ರಕರ್ತರು ಒಗ್ಗೂಡಿದರೆ ಏನು ಸಾಧನೆ ಮಾಡುಬಹುದು ಎಂಬುದಕ್ಕೆ ಇಂದಿನ ಸಮ್ಮೇಳನವೇ ಸಾಕ್ಷಿಯಾಗಿದೆ.ತುಮಕೂರು ಜಿಲ್ಲಾ ಪತ್ರಕರ್ತರು ಒಂದು ತಂಡವಾಗಿ ಕೆಲಸ ಮಾಡಿ, ಸಮ್ಮೇಳನ ಯಶಸ್ವಿಯಾಗಲು ದುಡಿದಿದ್ದಾರೆ ಎಂದರು.

ಶಾಸಕರಾದ ಸಿ.ಬಿ.ಸುರೇಶಬಾಬು, ಬಿ.ಸುರೇಶಗೌಡ ಮಾತನಾಡಿದರು.

ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್,ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್,ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್,ಡಾ.ನಾಗಣ್ಣ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *