
ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶಗೌಡ ಇದು ಕಪೋಲ ಕಲ್ಪಿತ ನಾನೊಬ್ಬ ಪಕ್ಷದ ನಿಷ್ಟಾವಂತ ಕಾರ್ಯಕರ್ತ ನಮ್ಮ ಪಕ್ಷ ನನಗೆ ಐದು ಬಾರಿ ಟಿಕೆಟ್ ನೀಡಿದೆ ಎರಡು ಬಾರಿ ರಾಜ್ಯ ಕಾರ್ಯದರ್ಶಿ ಎರಡು ಬಾರಿ ಜಿಲ್ಲಾ ಘಟಕದ ಅಧ್ಯಕ್ಷ ಒಂದು ಬಾರಿ ಮೈಸೂರ್ ಪೇಪರ್ ಮಿಲ್ ನ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ಹೇಳಿದರು.
ನನ್ನ ಪಕ್ಷ ನನಗೆ ತಾಯಿ ಸಮ ನಾನು ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ನಡೆಸುವುದು ಇಲ್ಲ ಮುಂದೆಯೂ ಕೂಡ ಪಕ್ಷದಲ್ಲೇ ಇರುತ್ತೇನೆ ಎಂದು ಹೇಳಿದರು.
ನಾನು ವಾಜಪೇಯಿ ನರೇಂದ್ರ ಮೋದಿ ಎಲ್ ಕೆ ಅಡ್ವಾಣಿ ಮುರಳಿ ಮನೋಹರ್ ಜೋಶಿ ಯಡಿಯೂರಪ್ಪ ಅಂತಹ ದೂರ ದೃಷ್ಟಿಯುಳ್ಳ ನಾಯಕತ್ವವನ್ನು ನೋಡಿ ಅಂದು ವಿದ್ಯಾರ್ಥಿ ನಾಯಕನಾಗಿದ್ದಾಗಲೇ ಬಿಜೆಪಿಗೆ ಸೇರ್ಪಡೆಯಾಗಿ ಕುಣಿಗಲ್ನಲ್ಲಿ ಟಿಕೆಟ್ ಪಡೆದಿದ್ದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಹೋಗಿ ನನಗೆ ಆಗಬೇಕಾದ್ದು ಏನೂ ಇಲ್ಲ ನಮ್ಮ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಕ್ಷೇತ್ರದ ಶಾಸಕನಾಗಿ ಕ್ಷೇತ್ರಕ್ಕೆ ನಾನೇ ಮಂತ್ರಿ ನಾನೇ ಮುಖ್ಯಮಂತ್ರಿ ಎಂದು ಸುರೇಶ ಗೌಡ ತಿಳಿಸಿದರು.ಆರ್ ಸಿ ಕಾಲೇಜ್ನ ವಿದ್ಯಾರ್ಥಿ ದೆಸೆಯಿಂದಲೂ ಕೂಡ ನನ್ನ ಅನೇಕ ಸ್ನೇಹಿತರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ ಅವರ ವಿಶ್ವಾಸ ಈಗಲೂ ಇದೆ ಮುಂದೆಯೂ ಇರುತ್ತದೆ ಹಾಗಂತ ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಂಗಳಾಪುರ ಗ್ರಾಮದಲ್ಲಿ ಅಂದಾಜು 34.5 ಲಕ್ಷ ರೂಪಾಯಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹರಿಜನ-ಗಿರಿಜನ ಉಪಯೋಜನೆ ಹಾಗೂ 3050-5054 ಯೋಜನೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಸುಸಜ್ಜಿತ ಸಿಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಸುಸಜ್ಜಿತವಾಗಿ ರಸ್ತೆ ಕುಡಿಯುವ ನೀರು, ಚರಂಡಿ, 24 ಗಂಟೆ ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದೆಂದು ಸುರೇಶ್ ಗೌಡ ತಿಳಿಸಿದರು.
ನನ್ನ ಕಾಲಾವಧಿಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾಡಿದಂತ ಕಾಮಗಾರಿಗಳು ಇಂದಿಗೂ ಒಂದೇ ಒಂದು ರಸ್ತೆ ಕೂಡ ಹಾನಿಯಾಗಿಲ್ಲ
ಅಷ್ಟು ಗುಣಮಟ್ಟದ ಕಾಮಗಾರಿಗಳಾಗುವಂತೆ ಹಗಲು ರಾತ್ರಿ ಎನ್ನದೆ ಗುತ್ತಿಗೆದಾರರನ್ನು ಬೆನ್ನತ್ತಿ ಕೆಲಸ ಮಾಡಿಸುತ್ತಿದ್ದೆ ಎಂದು ಸುರೇಶ್ ಗೌಡ ನೆನಪಿಸಿಕೊಂಡರು.
ಈಗಲೂ ಕೂಡ ಕಾಮಗಾರಿಯ ಗುಣಮಟ್ಟದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ.
ಸಿಮೆಂಟ್ ರಸ್ತೆ ಚರಂಡಿ ನಿರ್ಮಾಣ ಮಾಡುವಾಗ ತಾಂತ್ರಿಕತೆಗನಗುಣವಾಗಿ ಮರಳು ಸಿಮೆಂಟ್ ಜಲ್ಲಿ ಬಳಕೆ ಮಾಡಿ ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕು ಆಗ ಮಾತ್ರ ನಾನು ಸೌಮ್ಯವಾಗಿರುತ್ತೇನೆ. ಇಲ್ಲವಾದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಲು ನನ್ನ ಲೆಟರ್ ಹೆಡ್ ಖಾರವಾಗಿ ಕೆಲಸ ಮಾಡುತ್ತದೆ ಎಂದು ಸುರೇಶಗೌಡ ಖಡಕ್ಕಾಗಿ ತಿಳಿಸಿದರು.