ನವದೆಹಲಿ : ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದ್ದು, ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಷಡಕ್ಷರಿ ದೆಹಲಿಗೆ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಷಡಕ್ಷರಿ ದೆಹಲಿಗೆ ತೆರಳಿದ್ದರು.

ಈ ವೇಳೆ ಶಾಸಕರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ರೂಮ್ ಗೆ ಹೋಗಿ ಮಾತನಾಡಿಸಲು ಪ್ರಯತ್ನಿಸಿದಾಗ ಮಾತನಾಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ತಕ್ಷಣ ಶಾಸಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಶಾಸಕ ಷಡಕ್ಷರಿ, ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೋಣೆಗೆ ಬಂದು ಮಾತಾಡಲು ತೊಂದರೆಯಾಗುತ್ತಿದೆ ಎಂದು ಸಂಜ್ಞೆಯಲ್ಲಿ ಹೇಳಿದ್ದಾರೆ. ಕೂಡಲೇ ಪರಮೇಶ್ವರ್ ಅವರು ಕರ್ನಾಟಕ ಭವನದ ಸಿಬ್ಬಂದಿ ಸಹಾಯದೊಂದಿಗೆ ಶಾಸಕರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರು ಈ ಹಿಂದೆ ನರರೋಗಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದುಕೊಂಡಿದ್ದರು.
ದೆಹಲಿಯಲ್ಲಿ ವರಿಷ್ಠರ ಭೇಟಿಗೆ ತೆರಳಿದ್ದ ವೇಳೆಯೇ ಅಸ್ವಸ್ಥರಾಗಿದ್ದು, ದೆಹಲಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಜಿ.ಪರಮೇಶ್ವರ್, ಆರ್.ರಾಜೇಂದ್ರ ಸೇರಿ ನಾಯಕರು ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.
ದೆಹಲಿಯಲ್ಲಿ ಇದ್ದ ಸಂದರ್ಭದಲ್ಲಿ ಶಾಸಕ ಕೆ.ಷಡಕ್ಷರಿ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿದ್ದಂತೆ, ಅವರ ಜೊತೆಯಲ್ಲಿದ್ದ ನಾಯಕರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್ನ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಆರ್. ರಾಜೇಂದ್ರ ಅವರು ತ್ವರಿತ ನಿರ್ಧಾರ ತೆಗೆದುಕೊಂಡು, ಷಡಕ್ಷರಿಯನ್ನು ಕೂಡಲೇ ದೆಹಲಿಯ ಪ್ರಸಿದ್ಧ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ತಿಪಟೂರಿನ ಜನಪ್ರತಿನಿಧಿಯಾಗಿರುವ ಷಡಕ್ಷರಿ ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಚುರುಕಾಗಿ ಕೆಲಸ ಮಾಡುತ್ತಿದ್ದರು. ಮಂತ್ರಿ ಸ್ಥಾನಕ್ಕಾಗಿ ಅವರು ಪ್ರಯತ್ನಿಸುತ್ತಿದ್ದರೆಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ, ದೆಹಲಿಗೆ ತೆರಳಿ ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಮುಂದಾಗಿದ್ದರು. ಇಂತಹ ಸಂದರ್ಭದಲ್ಲಿ ಅಚಾನಕ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರುವುದು ರಾಜಕೀಯ ವಲಯಕ್ಕೂ, ಅವರ ಬೆಂಬಲಿಗರಿಗೂ ಆತಂಕದ ಸಂಗತಿಯಾಗಿದೆ.
ತಿಪಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಷಡಕ್ಷರಿ ಅವರ ಆರೋಗ್ಯದ ಬಗ್ಗೆ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಆಸ್ಪತ್ರೆಯಿಂದ ಬರುತ್ತಿರುವ ಪ್ರತಿಯೊಂದು ಮಾಹಿತಿಗೂ ಕಾತರದಿಂದ ಕಾದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಷಡಕ್ಷರಿ ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥನೆ ಮಾಡುವ ಸಂದೇಶಗಳು ಹರಿದಾಡುತ್ತಿವೆ. ರಾಜಕೀಯ ವಲಯದಲ್ಲಿ ಷಡಕ್ಷರಿ ಅವರು ಮಂತ್ರಿ ಸ್ಥಾನಕ್ಕೆ ಬಲವಾದ ದಾವೆದಾರರಾಗಿ ಕಾಣಿಸಿಕೊಂಡಿದ್ದ ಸಂದರ್ಭದಲ್ಲಿ, ಅವರ ಆರೋಗ್ಯದ ಈ ತುರ್ತು ಸಮಸ್ಯೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.