ದೂರದೃಷ್ಟಿ, ಪ್ರಗತಿಯ ಬಜೆಟ್ : ಶಾಸಕ ಜಿ.ಬಿ.ಜ್ಯೋತಿಗಣೇಶ್

ಪ್ರಧಾನಿ ನರೇಂದ್ರ ಮೋದಿ ಅವರು ಜನರ ಪ್ರಗತಿಯ ಆಶಯದಂತೆ ಮುಂದಿನ 25 ವರ್ಷಗಳ ದೂರದೃಷ್ಟಿಯ ಪ್ರಗತಿದಾಯಕ ಬಜೆಟ್‍ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ ಎಂದು ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದ್ದಾರೆ. 

ಶಾಸಕರು ಮಾತನಾಡಿ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆ ಮಾಡಿರುವುದು ನೀರಾವರಿ ಸಮಸ್ಯೆಗೆ ಪರಿಹಾರವೆನಿಸಿದೆ. ಮಧ್ಯಮ ವರ್ಗದ ಜನರಿಗಾಗಿ ಆದಾಯ ತೆರಿಗೆ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಏರಿಕೆ, ಪ್ರಧಾನಿ ಕೌಶಲ್ಯ ವಿಕಾಸ ಯೋಜನೆ 4.0 ಘೋಷಣೆ, ಸ್ಕಿಲ್ ಇಂಡಿಯಾ ಮೂಲಕ ಉದ್ಯೋಗ ಸೃಷ್ಠಿ, 47 ಲಕ್ಷ ಯುವಕರಿಗೆ ಕಲಿಕಾ ವೇತನ ಹಾಗೂ 30 ಅಂತರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಕ್ಕೆ ಅಮೃತ ಕಾಲ (ಏಕಲವ್ಯ ಮಾದರಿ ಶಾಲೆಗಳ ಸ್ಥಾಪನೆ, 38,800 ಶಿಕ್ಷಕರ ನೇಮಕ, 3.5 ಲಕ್ಷ ಗಿರಿಜನ ವಿದ್ಯಾರ್ಥಿಗಳಿಗೆ ಅನುಕೂಲ, ಶಿಕ್ಷಣ ಕ್ಷೇತ್ರದಲ್ಲಿ ಭಾರತದಾದ್ಯಂತ 157 ನರ್ಸಿಂಗ್ ಕಾಲೇಜುಗಳ ಸ್ಥಾಪನೆ, ನಗರೋತ್ಥಾನಕ್ಕೆ 10 ಸಾವಿರ ಕೋಟಿ ಮೀಸಲು, ಎಂ.ಎಸ್.ಎಂ.ಇ ಗಳಿಗೆ ವಿವಾದ್ ಸೆ ವಿಶ್ವಾಸ್ ಯೋಜನೆ, 2070ಕ್ಕೆ ಕಾರ್ಬನ್ ಮುಕ್ತ ಭಾರತಕ್ಕೆ ಗುರಿ, ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79,000 ಕೋಟಿ ಅನುದಾನ, ರಾಸಯನಿಕ ಮುಕ್ತ ಸಹಜ - ಸಾವಯುವ ಕೃಷಿಗೆ ಆದ್ಯತೆ, “ದೇಕೋ ಅಪ್ನಾ ದೇಶ್” - ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಆ್ಯಪ್, ಒಂದು ಜಿಲ್ಲೆ ಒಂದು ಉತ್ಪನ್ನ, ಪೌರಕಾರ್ಮಿಕರಿಗೆ ಕರ್ಮ ಯೋಗಿ ಯೋಜನೆ, 8 ಲಕ್ಷ ಸ್ವ-ಸಹಾಯ ಗುಂಪುಗಳಿಗೆ ನೆರವು, ಸಣ್ಣ ಕೈಗಾರಿಕೆಗಳಿಗೆ 9 ಸಾವಿರ ಕೋಟಿ ಸಾಲ ಸೌಲಭ್ಯ, ಸಾಲದ ಮೇಲಿನ ಬಡ್ಡಿ ದರ ಶೇ.1 ರಷ್ಟು ಇಳಿಕೆ ಹಾಗೂ ಮಹಿಳೆಯರಿಗೆ ಮಹಿಳಾ ಸಮ್ಮಾನ್ ಯೋಜನೆ ಜಾರಿ-ಠೇವಣಿ ಇಡುವ ಮಹಿಳೆಯರಿಗೆ ಶೇ.7.5 ರಷ್ಟು ಬಡ್ಡಿ ಇವೆಲ್ಲವೂ ಭವಿಷ್ಯದಲ್ಲಿ ಭಾರತವನ್ನು ಆತ್ಮನಿರ್ಭರದೆಡೆಗೆ ಕೊಂಡೊಯ್ಯುವ ಸಾಧನಗಳೆನಿಸಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *